Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಿಮ್ಮ ಶವಗಳು ಈ ಮರುಭೂಮಿಯಲ್ಲೇ ಬೀಳುವುವು. ನೀವು ನನಗೆ ವಿರೋಧವಾಗಿ ಗೊಣಗಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ [ಅರಣ್ಯದಲ್ಲೇ ಸಾಯುವರು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಿಮ್ಮ ಶವಗಳು ಈ ಮರುಭೂಮಿಯಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಈ ಮರುಭೂಮಿಯಲ್ಲಿ ನನಗೆ ವಿರೋಧವಾಗಿ ಗೊಣಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸತ್ತು ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:29
13 ತಿಳಿವುಗಳ ಹೋಲಿಕೆ  

ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು.


ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.


ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.


ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.


ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ.


ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.


ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.


ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.


ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.


ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು