Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇದು ಸರ್ವೇಶ್ವರನೆಂಬ ನಾನೇ ಹೇಳಿದ ಮಾತು. ನನಗೆ ವಿರೋಧವಾಗಿ ಒಟ್ಟುಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಿಯೇ ತೀರುವೆನು. ಮರುಭೂಮಿಯಲ್ಲೇ ಅವರೆಲ್ಲರು ಸಾಯಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಇದು ಯೆಹೋವನೆಂಬ ನಾನೇ ಹೇಳಿದ ಮಾತು; ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಲೇ ಮಾಡುತ್ತೇನೆ; ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಇದು ಯೆಹೋವನೆಂಬ ನಾನು ಹೇಳಿದ ಮಾತು. ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಖಂಡಿತವಾಗಿ ಮಾಡುತ್ತೇನೆ. ಈ ಮರುಭೂಮಿಯಲ್ಲಿಯೇ ಇವರೆಲ್ಲರೂ ಸಾಯಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೆಹೋವ ದೇವರಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಸೇರಿರುವ ಈ ದುಷ್ಟ ಸಭೆಗೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಮರುಭೂಮಿಯಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:35
10 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.


ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.


ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.


ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.


ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.


ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.


ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು