Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅಲ್ಲಿ ಅಮಾಲೇಕ್ಯರು ಹಾಗೂ ಕಾನಾನ್ಯರು ನಿಮಗೆ ಎದುರಾಗುವರು; ನೀವು ಅವರ ಕತ್ತಿಗೆ ತುತ್ತಾಗುವಿರಿ. ನೀವು ಸರ್ವೇಶ್ವರನ ಮಾತನ್ನು ಅನುಸರಿಸದೆ ಪ್ರತಿಭಟಿಸಿದ್ದೀರಿ. ಕತ್ತಿಗೆ ತುತ್ತಾಗುವಿರಿ. ಈ ಕಾರಣ ಅವರು ನಿಮ್ಮೊಂದಿಗೆ ಇರುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅಲ್ಲಿ ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಸತ್ತೀರಿ; ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಅಮಾಲೇಕ್ಯರೂ ಕಾನಾನ್ಯರೂ ನಿಮ್ಮನ್ನು ಎದುರಿಸಲು ಅಲ್ಲಿರುವುದರಿಂದ ನೀವು ಅವರ ಖಡ್ಗದಿಂದ ಸಾಯುವಿರಿ. ನೀವು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿರುವುದರಿಂದ ನೀವು ಅವರ ಖಡ್ಗಕ್ಕೆ ತುತ್ತಾಗುವಿರಿ. ನೀವು ಯೆಹೋವ ದೇವರ ಕಡೆಯಿಂದ ತಿರುಗಿದ ಕಾರಣ, ಆತನು ನಿಮ್ಮ ಸಂಗಡ ಇರುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:43
14 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಅಮಾಲೇಕ್ಯರೂ, ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿ ಕೆಂಪು ಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು” ಎಂದು ಹೇಳಿದನು.


ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು.


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ, ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ.


ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ.


ಆದುದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದವರನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.


ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,


ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ; ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು