Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಆ ಮಲೆನಾಡಿನಲ್ಲಿ ವಾಸವಾಗಿದ್ದ ಅಮಾಲೇಕ್ಯರು ಹಾಗೂ ಕಾನಾನ್ಯರು ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಬಂದು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೆ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆಗ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಸೋಲಿಸಿ ಹೊರ್ಮಾ ಪಟ್ಟಣದವರೆಗೂ ಅಟ್ಟಿಸಿಕೊಂಡುಬಂದು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ, ಕಾನಾನ್ಯರೂ ಇಳಿದು, ಅವರನ್ನು ಹೊಡೆದು, ಹೊರ್ಮಾದವರೆಗೆ ಅಟ್ಟಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:45
14 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಾಯಿತು.


ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.


ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದ ವರೆಗೂ ಬೆನ್ನಟ್ಟಿ ಸಂಹರಿಸಿದರು.


ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.


ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಗಳವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಾಯೇಲರ ಧೈರ್ಯ ಕುಂದಿಹೋಯಿತು.


ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?


ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು.


ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು.


ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಹೊರ್ಮದವರು, ಬೋರಾಷಾನಿನವರು, ಅತಾಕಿನವರು,


ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು.


ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.


ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು