Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಾಲೂ ಜೇನೂ ಹರಿಯುವ ನಾಡದು! ಸರ್ವೇಶ್ವರನಿಗೆ ಮೆಚ್ಚುಗೆಯಾದರೆ ಅದರಲ್ಲಿ ನಮ್ಮನ್ನು ಸೇರಿಸುವರು, ಅದನ್ನೇ ನಮ್ಮ ಸ್ವಾಧೀನಕ್ಕೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದು ಹಾಲೂ ಜೇನೂ ಹರಿಯುವ ದೇಶ; ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಅದರಲ್ಲಿ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದು ಹಾಲೂ ಜೇನೂ ಹರಿಯುವ ದೇಶ. ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಆ ದೇಶದೊಳಗೆ ನಮ್ಮನ್ನು ಕರೆದೊಯ್ದು ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ನಮ್ಮನ್ನು ಇಷ್ಟಪಟ್ಟರೆ ಹಾಲೂ ಜೇನೂ ಹರಿಯುವ ದೇಶವಾಗಿರುವ ಆ ದೇಶಕ್ಕೆ ನಮ್ಮನ್ನು ಬರಮಾಡಿ, ಅದನ್ನು ನಮಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:8
15 ತಿಳಿವುಗಳ ಹೋಲಿಕೆ  

ಆತನು ನನ್ನನ್ನು ಅಪಾಯದಿಂದ ಬಿಡಿಸಿದನು. ನನ್ನನ್ನು ಮೆಚ್ಚಿ ರಕ್ಷಿಸಿದನು.


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.


ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.


ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.


ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು