Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶೀಯರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ. ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ಹೇಗೆ ಇರುವಿರೋ ಹಾಗೆಯೇ ಅನ್ಯದೇಶೀಯನೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ವಿಧಿಯಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ ಅನ್ಯದೇಶದವನೂ ಹಾಗೆಯೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮಗೂ ನಿಮ್ಮಲ್ಲಿರುವ ಪರದೇಶದವರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವೂ ಪರದೇಶಿಯರೂ ಒಂದೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮಗೂ ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಕಟ್ಟಳೆ ಇರಬೇಕು. ಯೆಹೋವ ದೇವರ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:15
17 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,


“ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ನಿಯಮವಿರಬೇಕು.”


ಸ್ವದೇಶದವನಿಗೂ, ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಎಂದನು.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


ದಾವೀದನು ಇಸ್ರಾಯೇಲರಲ್ಲಿ ಇದನ್ನು ಕಟ್ಟಳೆಯಾಗಿ ನೇಮಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.


“ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.


ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’” ಎಂಬುದೇ.


ಯೆಹೋವನು ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ, “ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗೆಂದರೆ, ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.


ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವೆಂದು ಆಚರಿಸಬೇಕು.


ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.


ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.


ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.


ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.


ಯೆಹೂದ್ಯರು ಆ ಪತ್ರದ ಮಾತುಗಳನ್ನೂ ಅವುಗಳ ಸಂಬಂಧವಾಗಿ ತಾವೇ ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಮನಸ್ಸಿಗೆ ತೆಗೆದುಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು