Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನಾದ ನನಗೆ ಸುವಾಸನೆಯ ಕಾಣಿಕೆಯಾಗಿ ದನಕರುಗಳಿಂದ ಬಲಿಯನ್ನು ಅರ್ಪಿಸುವಾಗ ಅದು ಹರಕೆಯ, ಕೃತಜ್ಞತೆಯ ಹಬ್ಬಾಚರಣೆಯ, ಶಾಂತಿಸಮಾಧಾನದ ಬಲಿಯಾಗಿರಲಿ ಅಥವಾ ದಹನಬಲಿಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕಾಗಿ ದನಗಳಲ್ಲಾಗಲಿ ಆಡುಕುರಿಗಳಲ್ಲಾಗಲಿ ಒಂದು ಪಶುವನ್ನು ಹೋಮಮಾಡುವವನು ಸರ್ವಾಂಗ ಹೋಮಮಾಡಿದರೂ ಸರಿಯೇ, ಹರಕೆ ಸಲ್ಲಿಸುವದಕ್ಕೋ ಕೃತಜ್ಞತೆಯನ್ನು ತೋರಿಸುವದಕ್ಕೋ ಹಬ್ಬವನ್ನು ಆಚರಿಸುವದಕ್ಕೋ ಸಮಾಧಾನಯಜ್ಞ ಮಾಡಿದರೂ ಸರಿಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ನಿಮ್ಮ ಮಂದೆಯಿಂದಾಗಲಿ ಹಿಂಡಿನಿಂದಾಗಲಿ ಅಗ್ನಿಯ ಮೂಲಕ ಯಜ್ಞವನ್ನರ್ಪಿಸುವವನು ಸರ್ವಾಂಗಹೋಮ ಮಾಡಿದರೂ ಅಥವಾ ಸಮಾಧಾನಯಜ್ಞಮಾಡಿದರೂ ಹರಕೆಯ ಯಜ್ಞಮಾಡಿದರೂ ಅಥವಾ ಸ್ವಇಚ್ಛೆಯಿಂದ ಯಜ್ಞಮಾಡಿದರೂ ನಿಯಮಿತ ಹಬ್ಬಗಳಲ್ಲಿ ಯಜ್ಞಮಾಡಿದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರಿಗೆ ಪಶುಗಳಿಂದಾದರೂ ಕುರಿಗಳಿಂದಾದರೂ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ, ಹರಕೆಯನ್ನು ಈಡೇರಿಸುವ ಬಲಿಯನ್ನಾಗಲಿ, ಉಚಿತವಾದ ಸಮರ್ಪಣೆಯಾಗಲಿ, ನಿಮ್ಮ ಪವಿತ್ರ ಹಬ್ಬಗಳಲ್ಲಿಯಾಗಲಿ ಯೆಹೋವ ದೇವರಿಗೆ ಬೆಂಕಿಯಿಂದ ಅರ್ಪಿಸಲಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:3
27 ತಿಳಿವುಗಳ ಹೋಲಿಕೆ  

ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.


ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.


ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ,


ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು.


ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.


ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.


ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.


ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.


“‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.


ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು.


ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.


ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ.


ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?


ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.


ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.


ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು