Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಭೂಮಿ ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸೇರಿದ ವ್ಯಕ್ತಿಗಳೆಲ್ಲರನ್ನೂ ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಭೂವಿುಯು ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಭೂಮಿಯೇ ಬಾಯಿತೆರೆದು ಅವರನ್ನು ನುಂಗಿಬಿಟ್ಟಿತೊ ಎಂಬಂತೆ, ಅವರ ಕುಟುಂಬಗಳವರನ್ನು ಕೋರಹನ ಎಲ್ಲಾ ಹಿಂಬಾಲಕರನ್ನು ಮತ್ತು ಅವರ ಆಸ್ತಿಯೆಲ್ಲವನ್ನು ನುಂಗಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಭೂಮಿಯು ತನ್ನ ಬಾಯಿತೆರೆದು, ಅವರನ್ನೂ, ಅವರ ಮನೆಗಳನ್ನೂ, ಕೋರಹನಿಗೆ ಸಂಬಂಧಪಟ್ಟ ಸಕಲ ಜನರನ್ನೂ, ಅವರಿಗಿದ್ದದ್ದನ್ನೆಲ್ಲಾ ನುಂಗಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:32
21 ತಿಳಿವುಗಳ ಹೋಲಿಕೆ  

ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.


ಆದರೆ ಭೂಮಿಯು ಆ ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು.


ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು; ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು.


ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು.


ಕೆಹಾತನ ಸಂತಾನದವರು: ಇವನ ಮಗ ಅಮ್ಮೀನಾದಾಬ್, ಇವನ ಮಗ ಕೋರಹ. ಕೋರಹನ ಮಗ ಅಸ್ಸೀರ್,


ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.


ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.


ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!


ಇವನು ತಹತನ ಮಗ. ತಹತನು ಅಸೀರನ ಮಗ, ಅಸ್ಸೀರನು ಎಬ್ಯಾಸಾಫನ ಮಗ, ಇವನು ಕೋರಹನ ಮಗ, ಕೋರಹನು ಇಚ್ಹಾರನ ಮಗ.


ರೂಬೇನನ ಮೊಮ್ಮಕ್ಕಳೂ, ಎಲೀಯಾಬನ ಮಕ್ಕಳೂ ಆದ ದಾತಾನ್ ಮತ್ತು ಅಬೀರಾಮರು ತಿರುಗಿ ಬಿದ್ದಾಗ ಭೂಮಿಯು ಬಾಯ್ದೆರೆದು ಅವರನ್ನೂ, ಅವರ ಮನೆಯವರನ್ನೂ, ಅವರ ಡೇರೆಗಳನ್ನೂ ಮತ್ತು ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ.


“ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ.


ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು.


ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.


ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.


ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು.


ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು.


ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ.


ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.


ಒಬ್ಬನು ಹೊಲವನ್ನು ಉಳುತ್ತಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ.


ಭೂಮಿಯು ಒಡೆದೇ ಇದೆ, ಬಿರಿದಿದೆ, ಕದಲಿಯೇ ಹೋಗಿದೆ.


“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು