ಅರಣ್ಯಕಾಂಡ 18:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಆರೋನನಿಗೆ ಹೀಗೆಂದರು: “ದೇವದರ್ಶನದ ಗುಡಾರದ ವಿಷಯದಲ್ಲಿ ಏನಾದರು ಅಕ್ರಮ ನಡೆದರೆ ನೀನು, ನಿನ್ನ ಸಂತತಿಯವರು ಮತ್ತು ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕ ಸೇವೆಯ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನು ಮತ್ತು ನಿನ್ನ ಸಂತತಿಯವರು ಮಾತ್ರ ಆ ದೋಷದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಯೆಹೋವನು ಆರೋನನಿಗೆ - ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ ನಿನ್ನ ಸಂತತಿಯವರೂ ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ ನಿನ್ನ ಸಂತತಿಯವರೂ ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಗ ಯೆಹೋವನು ಆರೋನನಿಗೆ, “ಪವಿತ್ರ ವಸ್ತುಗಳ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನೂ ನಿನ್ನ ಗಂಡುಮಕ್ಕಳೂ ನಿನ್ನ ಕುಲದವರೆಲ್ಲರೂ ಅದರ ಅಪರಾಧದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನು ಮತ್ತು ನಿನ್ನ ಗಂಡುಮಕ್ಕಳು ಮಾತ್ರ ಅದರ ಅಪರಾಧದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಆರೋನನಿಗೆ, “ನೀನೂ, ನಿನ್ನ ಪುತ್ರರೂ, ನಿನ್ನ ಪಿತೃಗಳ ಮನೆಯವರೂ ಪರಿಶುದ್ಧ ಸ್ಥಳಕ್ಕೆ ವಿರೋಧವಾಗಿ ನಡೆಯುವ ಕಾರ್ಯಗಳ ಜವಾಬ್ದಾರಿ ವಹಿಸಬೇಕು. ಯಾಜಕತ್ವಕ್ಕೆ ವಿರೋಧವಾಗಿ ನಡೆಯುವ ಅಕ್ರಮಗಳಿಗೆ ನೀನು ಮತ್ತು ನಿನ್ನ ಪುತ್ರರು ಮಾತ್ರ ಹೊಣೆಯಾಗಿರುತ್ತೀರಿ. ಅಧ್ಯಾಯವನ್ನು ನೋಡಿ |