Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಜನರು ತಮ್ಮ ನಾಡಿನ ಎಲ್ಲ ಬೆಳೆಗಳಲ್ಲಿ ನನಗೆ ತರುವ ಪ್ರಥಮ ಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು; ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲವು ನಿಮಗೆ ಸಲ್ಲಬೇಕು. ನಿಮ್ಮ ಕುಟುಂಬಗಳಲ್ಲಿ ಶುದ್ಧರಾಗಿರುವವರೆಲ್ಲರೂ ಅವುಗಳನ್ನು ಊಟಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಯೆಹೋವ ದೇವರಿಗೆ ತರುವ ಅವರ ದೇಶದಲ್ಲಿರುವ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವುವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:13
13 ತಿಳಿವುಗಳ ಹೋಲಿಕೆ  

ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.


ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.


ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.


ಒಂದು ಪುಟ್ಟಿಯಲ್ಲಿ ಫಲ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು. ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.


ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”


ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.


“ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.


ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ.


ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.


ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.


ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.


ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು