Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಕುಲದ ಮೂಲ ಪುರುಷನಾದ ಲೇವಿಯ ವಂಶದವರನ್ನು ನಿನ್ನ ಜೊತೆಯಲ್ಲಿರಿಸಿಕೊಂಡು, ನಿನ್ನ ಕೈಕೆಳಗೆ ಸೇವೆಮಾಡಿಸು. ಆದರೆ ಮಂಜೂಷವಿರುವ ಗುಡಾರದ ಮುಂದೆ ನೀನು ಮತ್ತು ನಿನ್ನ ಮಕ್ಕಳು ಮಾತ್ರ ಸೇವೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಕುಲದ ಮೂಲಪುರುಷನಾದ ಲೇವಿಯ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆ ಮಾಡಿಸಬೇಕು; ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನ ತಂದೆಯ ಕುಲದವರೂ ನಿನ್ನ ರಕ್ತಸಂಬಂಧಿಗಳೂ ಆಗಿರುವ ಲೇವಿಕುಲದವರನ್ನು ನಿನ್ನೊಡನೆ ಸೇರಿಸಿಕೊ; ನೀನು ಮತ್ತು ನಿನ್ನ ಗಂಡುಮಕ್ಕಳು ಒಡಂಬಡಿಕೆಯ ಮುಂದೆ ಇರುವಾಗ ಅವರು ನಿನ್ನೊಂದಿಗಿದ್ದು ನಿನಗೆ ಸಹಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿನ್ನ ಗೋತ್ರದ ಮೂಲಪುರುಷನಾದ ಲೇವಿ ವಂಶದವರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಏಕೆಂದರೆ ಅವರು ನಿನ್ನ ಕೂಡ ಇದ್ದು, ನಿನಗೆ ಸೇವೆಮಾಡಬೇಕು. ಆದರೆ ನೀನು ಮತ್ತು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷಿ ಗುಡಾರದ ಮುಂದೆ ಸೇವೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:2
16 ತಿಳಿವುಗಳ ಹೋಲಿಕೆ  

ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು.


“‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.


ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.


ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.


ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು.


ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.


ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ಆರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.


ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”


ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು.


ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,


ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.


ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು