Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಇಗೋ, ಇಸ್ರಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಲೇವಿಯರಿಗೆ ಕೊಟ್ಟಿದ್ದೇನೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವ ಅವರಿಗೆ ಇದು ಸಲ್ಲತಕ್ಕ ಸಂಭಾವನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಲೇವಿಯರು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವದಕ್ಕಾಗಿ ಇಸ್ರಾಯೇಲ್ಯರಿಂದ [ಸಕಲಪದಾರ್ಥಗಳ] ಹತ್ತನೆಯ ಪಾಲನ್ನು ಗೊತ್ತುಮಾಡಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಲೇವಿಯರು ದೇವದರ್ಶನಗುಡಾರಕ್ಕೋಸ್ಕರ ಮಾಡುವ ಭಾರವಾದ ಕೆಲಸಕ್ಕೆ ಪ್ರತಿಫಲವಾಗಿ ಪ್ರತಿಯೊಬ್ಬ ಇಸ್ರೇಲನ ದಶಾಂಶವನ್ನು ನಾನು ಲೇವಿಯರಿಗೆ ಅವರ ಪಾಲಾಗಿ ಕೊಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಅವರು ದೇವದರ್ಶನ ಗುಡಾರದ ಸೇವೆಯನ್ನೂ ಮಾಡುವುದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾಯೇಲರಲ್ಲಿ ಹತ್ತನೆಯ ಭಾಗವನ್ನು ಸೊತ್ತಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:21
26 ತಿಳಿವುಗಳ ಹೋಲಿಕೆ  

ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.


ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.


ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.


ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.


ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.


ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:


ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನೂ, ತಮ್ಮ ಆದಾಯದ ದಶಮಾಂಶವನ್ನೂ ಹಾಗು ದೇವರ ನೈವೇದ್ಯಕ್ಕಾಗಿ ಮುಡುಪಾಗಿ ಇಟ್ಟಿದ್ದನ್ನು ನಂಬಿಕೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಗೆ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮನಾದ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.


ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.


ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.


ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತಬೇಕು.


ಅವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ, ಇತರ ಲೇವಿಯರೊಂದಿಗೆ ಸಮವಾಗಿ ಭೋಗಿಸುವುದಕ್ಕೆ ಬಾಧ್ಯನಾಗಿರುವನು.


ಜೆರುಬ್ಬಾಬೆಲ್ ಮತ್ತು ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲರು ಗಾಯಕರಿಗೂ ದ್ವಾರಪಾಲಕರಿಗೂ ಪ್ರತಿದಿನ ಜೀವನಾಂಶವನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಮತ್ತು ಲೇವಿಯರು ತಮ್ಮದರಲ್ಲಿಯ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.


ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.


ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.


ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.


ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.


“ನೀನು ಲೇವಿಯ ಕುಲದವರನ್ನು ಹತ್ತಿರಕ್ಕೆ ಕರೆದು ಅವರು ದೇವರ ಸೇವಕಾರ್ಯಕ್ಕಾಗಿ ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.


ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು