Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ ‘ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ’” ಎಂದು ಹೇಳಿದ ಮಾತಿಗೆ ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಹತ್ತನೆಯ ಪಾಲನ್ನು ಅವರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದಲೇ ಇತರ ಇಸ್ರಯೇಲರಿಗೆ ಪಾಲು ದೊರಕುವಂತೆ ಅವರಿಗೆ ಪಾಲು ದೊರಕುವುದಿಲ್ಲವೆಂದು ಒತ್ತಿಹೇಳಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಸ್ರಾಯೇಲ್ಯರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನೇ ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನಲ್ಲಾ. ಇವರಿಗೆ ಇಸ್ರಾಯೇಲ್ಯರೊಂದಿಗೆ ಪಾಲು ದೊರೆಯುವದಿಲ್ಲವೆಂದು ನಾನು ಹೇಳಿದ ಮಾತಿಗೆ ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇಸ್ರೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನು ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ. ಇವರಿಗೆ ಇಸ್ರೇಲರೊಂದಿಗೆ ಪಾಲು ದೊರೆಯುವುದಿಲ್ಲವೆಂದು ನಾನು ಲೇವಿಯರ ಕುರಿತು ಹೇಳಿದ ಮಾತಿಗೆ ಇದೇ ಕಾರಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇಸ್ರಾಯೇಲರು ಯೆಹೋವ ದೇವರಿಗೆ ಬಲಿಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ. ಆದಕಾರಣ, ‘ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸೊತ್ತು ಇರಬಾರದು ಎಂದು ನಾನು ಅವರಿಗೆ ಹೇಳಿದ್ದೇನೆ,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:24
10 ತಿಳಿವುಗಳ ಹೋಲಿಕೆ  

“ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,


ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.


ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು.


ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.


“‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.


ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು.


ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.


ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು