Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಲೇವಿಯರಿಗೆ ನೀನು ಇಂತೆಂದು ಆಜ್ಞಾಪಿಸು - ‘ನಿಮ್ಮ ಸ್ವಂತಕ್ಕಾಗಿ ನಾನು ಗೊತ್ತುಮಾಡಿರುವ ಹತ್ತನೆಯ ಒಂದು ಪಾಲನ್ನು ಇಸ್ರಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯ ಒಂದು ಪಾಲನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು - ನಿಮ್ಮ ಸ್ವಂತಕ್ಕಾಗಿ ನಾನು ನೇವಿುಸಿರುವ ಹತ್ತನೆಯ ಪಾಲನ್ನು ನೀವು ಇಸ್ರಾಯೇಲ್ಯರಿಂದ ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯ ಪಾಲನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ನೀನು ಲೇವಿಯರಿಗೆ ಇದನ್ನು ತಿಳಿಸಬೇಕು: ಇಸ್ರೇಲರು ತಮ್ಮ ಆದಾಯದಲ್ಲಿ ಕೊಡುವ ದಶಾಂಶವನ್ನು ನಿಮ್ಮ ಪಾಲೆಂದು ನಾನು ನಿಗದಿಪಡಿಸಿದ್ದೇನೆ. ಇಸ್ರೇಲರು ದಶಾಂಶ ಕೊಟ್ಟಾಗ ನೀವು ಆ ದಶಾಂಶದಲ್ಲಿ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಸಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ಇಸ್ರಾಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯದರಿಂದ ಒಂದು ಪಾಲನ್ನು ಪ್ರತ್ಯೇಕಿಸಿ ಯೆಹೋವ ದೇವರಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:26
7 ತಿಳಿವುಗಳ ಹೋಲಿಕೆ  

ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.


“ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.


ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,


ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು.


“‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.


ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು