Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಮೈಲಿಗೆ ನಿಯಮವಿದು: ಯಾರಾದರೂ ಡೇರೆಯೊಳಗೆ ಸತ್ತ ಸಂದರ್ಭದಲ್ಲಿ ಆ ಡೇರೆಯೊಳಗಿರುವವರೆಲ್ಲರು ಹಾಗು ಅದರೊಳಗೆ ಬರುವವರು ಕೂಡ ಮೈಲಿಗೆಯಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 [ಹೊಲೆಗಳೆವ] ಕಟ್ಟಳೆ ಹೇಗಂದರೆ - ಯಾರಾದರೂ ಡೇರೆಯೊಳಗೆ ಸತ್ತ ಸಂದರ್ಭದಲ್ಲಿ ಆ ಡೇರೆಯಲ್ಲಿರುವವರೆಲ್ಲರೂ ಅದರೊಳಗೆ ಬರುವವರೂ ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಯಾವನಾದರೂ ಗುಡಾರದಲ್ಲಿ ಸತ್ತರೆ ಅನುಸರಿಸಬೇಕಾದ ನಿಯಮವಿದು: ಒಬ್ಬನು ಗುಡಾರದಲ್ಲಿ ಸತ್ತರೆ, ಆ ಗುಡಾರವನ್ನು ಪ್ರವೇಶಿಸುವ ಪ್ರತಿಯೊಬ್ಬನು ಮತ್ತು ಆ ಗುಡಾರದಲ್ಲಿರುವ ಪ್ರತಿಯೊಬ್ಬನು ಅಶುದ್ಧನಾಗುವನು. ಅವರು ಏಳು ದಿನಗಳವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತರೆ, ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ, ಡೇರೆಯಲ್ಲಿರುವವರೆಲ್ಲರೂ ಏಳು ದಿವಸಗಳವರೆಗೆ ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:14
13 ತಿಳಿವುಗಳ ಹೋಲಿಕೆ  

ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.


ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.


ಮುಚ್ಚಳ ಹಾಕದೆ ತೆರೆದಿರುವ ಎಲ್ಲಾ ಪಾತ್ರೆಗಳು ಅಶುದ್ಧವಾಗಿರುವವು.


“ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ,


“‘ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,


ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.


“ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.


ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು.


ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.


ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.


ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ, ತೊಗಲಿನ ಸಾಮಾನನ್ನೂ, ಮೇಕೆ ಕೂದಲಿನ ವಸ್ತ್ರಗಳನ್ನು ಮರದ ವಸ್ತುಗಳನ್ನು ಶುದ್ಧ ಮಾಡಿಕೊಳ್ಳಬೇಕು” ಎಂದು ಹೇಳಿದನು.


ಇಸ್ರಾಯೇಲರು ದೇಶವನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಸಮಾಧಿ ಮಾಡುತ್ತಲೇ ಇರುವರು.


ಅಂಥವನನ್ನು ಶುದ್ಧನಾದ ಮೇಲೂ, ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು