Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮೂರನೆಯ ದಿನದಲ್ಲೂ ಏಳನೆಯ ದಿನದಲ್ಲೂ ಮಡಿಗೆಟ್ಟವನ ಮೇಲೆ ಹಾಗೆಯೇ ಚಿಮುಕಿಸಬೇಕು. ಮಡಿಗೆಟ್ಟವನು ಏಳನೆಯ ದಿನ ದೋಷಪರಿಹಾರ ಹೊಂದುವನು. ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಕೊಂಡು ಸಂಜೆ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿವಿುಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಶುದ್ಧನಾಗಿರುವವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಚಿಮಿಕಿಸಬೇಕು. ಹೀಗೆ ಅವನು ಏಳನೆಯ ದಿನದಲ್ಲಿ ಶುದ್ಧನಾಗುವನು. ಬಳಿಕ ಅಶುದ್ಧನಾದವನು ತನ್ನ ಬಟ್ಟೆಯನ್ನು ತೊಳೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪವಿತ್ರನಾದವನು ಅಪವಿತ್ರನಾದವನ ಮೇಲೆ ಮೂರನೆಯ ದಿವಸದಲ್ಲಿಯೂ, ಏಳನೆಯ ದಿವಸದಲ್ಲಿಯೂ ಅದನ್ನು ಚಿಮುಕಿಸಲಿ. ಏಳನೆಯ ದಿವಸದಲ್ಲಿ ಅವನು ತನ್ನನ್ನು ಪವಿತ್ರ ಮಾಡಿಕೊಂಡು, ತನ್ನ ವಸ್ತ್ರಗಳನ್ನು ತೊಳೆದುಕೊಂಡು, ನೀರಿನಲ್ಲಿ ಸ್ನಾನ ಮಾಡಲಿ. ಹೀಗೆ ಸಂಜೆಯಲ್ಲಿ ಪವಿತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:19
18 ತಿಳಿವುಗಳ ಹೋಲಿಕೆ  

ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ.


ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,


ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.


ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.


ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.


ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಮೇಲೆ ನೀವು ಪಾಳೆಯದೊಳಗೆ ಬರಬಹುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು