Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತಮ್ಮ ನಾಡನ್ನು ದಾಟಿಹೋಗಲು ಅಪ್ಪಣೆ ಆಗಬೇಕೆಂದು ಬೇಡಿಕೊಳ್ಳುತ್ತೇನೆ. ನಾವು ಹೊಲಗದ್ದೆಗಳ ಮೇಲಾಗಲಿ, ದ್ರಾಕ್ಷಿತೋಟಗಳ ಮೂಲಕವಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನೂ ಕುಡಿಯುವುದಿಲ್ಲ. ರಾಜಮಾರ್ಗದಲ್ಲೇ ನಡೆದು, ತಮ್ಮ ನಾಡಿನ ಗಡಿ ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ,” ಎಂದು ಹೇಳಿಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತಮ್ಮ ದೇಶವನ್ನು ದಾಟಿಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲಗಳಲ್ಲಿ ಯಾದರೂ ದ್ರಾಕ್ಷೇತೋಟಗಳಲ್ಲಿಯಾದರೂ ಹೋಗುವದಿಲ್ಲ; ಬಾವಿಗಳ ನೀರನ್ನು ಕುಡಿಯುವದಿಲ್ಲ; ರಾಜ ಮಾರ್ಗದಲ್ಲಿಯೇ ನಡೆದು ತಮ್ಮ ದೇಶದ ಮೇರೆಗಳನ್ನು ದಾಟಿದ ತನಕ ಬಲಕ್ಕೂ ಎಡಕ್ಕೂ ತಿರುಗುವದಿಲ್ಲ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲಗಳಲ್ಲಿಯಾಗಲಿ ದ್ರಾಕ್ಷಿತೋಟಗಳಲ್ಲಿಯಾಗಲಿ ಹಾದುಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ತಮ್ಮ ದೇಶದ ಮೇರೆಗಳನ್ನು ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಮ್ಮನ್ನು ನಿನ್ನ ದೇಶದೊಳಗಿಂದ ದಾಟಿ ಹೋಗಗೊಡಿಸು; ನಾವು ಹೊಲವನ್ನಾದರೂ, ದ್ರಾಕ್ಷಿ ತೋಟವನ್ನಾದರೂ ದಾಟಿ ಹೋಗುವುದಿಲ್ಲ; ರಾಜಮಾರ್ಗದಲ್ಲಿ ಮಾತ್ರ ಹೋಗುತ್ತೇವೆ; ನಿನ್ನ ಮೇರೆಯನ್ನು ನಾವು ದಾಟುವವರೆಗೆ ಬಲಗಡೆಗಾದರೂ, ಎಡಗಡೆಗಾದರೂ ನಾವು ತಿರುಗುವುದಿಲ್ಲ,” ಎಂದು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:17
7 ತಿಳಿವುಗಳ ಹೋಲಿಕೆ  

“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.


ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.


ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.


ಈ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ ಸೇಯೀರ್ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಐಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ.


ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು