Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜನರಿಗೆ ನೀರು ಇಲ್ಲದೆಹೋಯಿತು. ಅವರು ಮೋಶೆ ಮತ್ತು ಆರೋನರ ವಿರುದ್ಧ ಸಭೆಸೇರಿ ಮೋಶೆಯ ಸಂಗಡ ವಾದಿಸತೊಡಗಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಆರೋನರಿಗೆ ವಿರೋಧವಾಗಿ ಕೂಡಿಕೊಂಡು ಮೋಶೆಯ ಸಂಗಡ ವಿವಾದಿಸುವವರಾಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಲ್ಲಿ ನೀರಿಲ್ಲದಿದ್ದ ಕಾರಣ ಅವರು ಮೋಶೆ ಆರೋನರ ವಿರುದ್ಧವಾಗಿ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಜನರಿಗೆ ನೀರು ಇಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:2
14 ತಿಳಿವುಗಳ ಹೋಲಿಕೆ  

ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.


ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.


ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.


ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.


“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.


ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.


ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.


ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.


ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು


ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು