Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಬಳಿಕ ಮೋಶೆ ಯಗ್ಜೇರನ್ನು ನೋಡಿ ಬರಲು ಗೂಢಚಾರರನ್ನು ಕಳಿಸಿದನು. ಇದಾದ ಬಳಿಕ ಇಸ್ರಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲ್ಯರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಮೋಶೆಯು ಯಗ್ಜೇರ್ ಪಟ್ಟಣದ ಗುಟ್ಟನ್ನು ತಿಳಿದುಕೊಂಡು ಬರುವುದಕ್ಕೆ ಕೆಲವು ಜನರನ್ನು ಕಳುಹಿಸಿದ ನಂತರ, ಇಸ್ರೇಲರು ಆ ಪಟ್ಟಣವನ್ನು ವಶಪಡಿಸಿಕೊಂಡರು. ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಇಸ್ರೇಲರು ಅಲ್ಲಿದ್ದ ಅಮೋರಿಯರನ್ನು ಓಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ಮೋಶೆಯು ಯಜ್ಜೇರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದನು. ಅವರು ಅವರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿರುವ ಅಮೋರಿಯರನ್ನು ಹೊರಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:32
10 ತಿಳಿವುಗಳ ಹೋಲಿಕೆ  

ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.


ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.


ಆಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ,


“ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,


ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು.


ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ,


ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ,


ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು.


ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು