Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡತೊಡಗಿದರು: “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,” ಎಂದು ಹೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ, “ಈ ಮರುಭೂಮಿಯಲ್ಲಿ ಸಾಯಲೆಂದು ನಮ್ಮನ್ನು ಈಜಿಪ್ಟಿನಿಂದ ಯಾಕೆ ಬರಮಾಡಿದೆ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:5
19 ತಿಳಿವುಗಳ ಹೋಲಿಕೆ  

ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?


ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.


ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.


ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?


ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ, ಹೊಟ್ಟೆ ಹಸಿದವನಿಗೆ ಕಹಿಯೆಲ್ಲಾ ಸಿಹಿ.


ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.


ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.


ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.


ಜನರು ಮೋಶೆಗೆ, “ನಾವೇನು ಕುಡಿಯಬೇಕು?” ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು.


ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.


“ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.


ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು