Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ಬಹಳ ಜನವಾಗಿರುವುದರಿಂದ ಮೋವಾಬ್ಯರು ಬಹಳ ಭಯಪಟ್ಟು ಹೆದರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರು ಬಹುಮಂದಿ ಇದ್ದುದರಿಂದ ಮೋವಾಬ್ಯರು ಬಹಳವಾಗಿ ದಿಗಿಲುಪಟ್ಟರು; ಇಸ್ರಯೇಲರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರು ಬಹು ಮಂದಿಯಾದದರಿಂದ ಮೋವಾಬ್ಯರು ಬಲು ದಿಗಿಲುಪಟ್ಟರು. ಅವರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾಗಿ ವಿುದ್ಯಾನ್ಯರ ಹಿರಿಯರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೋವಾಬ್ಯರು ನಿಜವಾಗಿಯೂ ಬಹಳ ಭಯಗೊಂಡಿದ್ದರು. ಯಾಕೆಂದರೆ ಇಸ್ರೇಲರು ಬಹುಸಂಖ್ಯಾತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಮೋವಾಬಿನವರು, ಇಸ್ರಾಯೇಲರು ಬಹಳ ಜನರಾಗಿರುವುದರಿಂದ ಅವರಿಗೆ ಬಹಳವಾಗಿ ಅಂಜಿದರು. ಮೋವಾಬಿನವರು ಇಸ್ರಾಯೇಲರಿಗೆ ದಿಗಿಲುಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:3
10 ತಿಳಿವುಗಳ ಹೋಲಿಕೆ  

ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.


ತೂರಿನ ಸಮಾಚಾರವು ಐಗುಪ್ತ್ಯರಿಗೆ ಮುಟ್ಟಿದಾಗ ಅದಕ್ಕಾಗಿ ಸಂಕಟಪಡುವರು.


ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.


ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.


ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.


ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.


ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು.


ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು