Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೋವಾಬ್ಯರ ಹಾಗೂ ಮಿದ್ಯಾನ್ಯರ ಮುಖ್ಯಸ್ಥರು ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಯನ್ನು ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದರು. ಬಾಲಾಕನು ಹೇಳಿಕಳಿಸಿದ್ದ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮೋವಾಬ್ಯರ ಹಿರಿಯರೂ ವಿುದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದಾಗ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೋವಾಬ್ಯರ ಹಿರಿಯರು ಮತ್ತು ಮಿದ್ಯಾನ್ಯರ ಹಿರಿಯರು ಬಿಳಾಮನ ಸೇವೆಗೋಸ್ಕರ ಹಣ ಕೊಡಲು ಹಣವನ್ನು ತೆಗೆದುಕೊಂಡು ಹೊರಟು ಅವನ ಬಳಿಗೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಗಳನ್ನು ತೆಗೆದುಕೊಂಡು ಹೋದರು. ಅವರು ಬಿಳಾಮನ ಬಳಿಗೆ ಬಂದು, ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:7
15 ತಿಳಿವುಗಳ ಹೋಲಿಕೆ  

ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.


ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.


ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’


ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.


ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’


ಬಿಳಾಮನು ಅವರಿಗೆ, “ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು” ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.


ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನಾಗಿದ್ದ ಬಿಳಾಮನೂ ಇದ್ದನು.


“ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.


ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು