Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಿಳಾಮನು ಅವರಿಗೆ, “ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು” ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಬಿಳಾಮನು, “ಈ ರಾತ್ರಿ ನೀವು ಇಲ್ಲೇ ತಂಗಿರಿ. ಸರ್ವೇಶ್ವರ ನನಗೆ ಕೊಡುವ ಉತ್ತರವನ್ನು ಬೆಳಿಗ್ಗೆ ತಿಳಿಸುವೆನು,” ಎಂದನು. ಅಂತೆಯೇ, ಮೋವಾಬ್ಯರ ಮುಖಂಡರು ಬಿಳಾಮನ ಬಳಿಯಲ್ಲಿ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ರಾತ್ರಿ ನೀವು ಇಲ್ಲೇ ಇಳಿದುಕೊಂಡಿರ್ರಿ; ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ತಿಳಿಸುವೆನು ಎಂದು ಹೇಳಲಾಗಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಿಳಾಮನು, “ಈ ರಾತ್ರಿ ನೀವು ಇಲ್ಲೇ ಇಳಿದುಕೊಳ್ಳಿರಿ. ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ನಿಮಗೆ ತಿಳಿಸುವೆನು” ಎಂದು ಹೇಳಿದನು. ಆದ್ದರಿಂದ ಮೋವಾಬ್ಯರ ಹಿರಿಯರು ಆ ರಾತ್ರಿ ಬಿಳಾಮನ ಮನೆಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಅವರಿಗೆ, “ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ. ಯೆಹೋವ ದೇವರು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು,” ಎಂದು ಹೇಳಿದನು. ಆದಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:8
13 ತಿಳಿವುಗಳ ಹೋಲಿಕೆ  

ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ. ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


ಅದಕ್ಕೆ ಬಿಳಾಮನು, “ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?” ಎಂದನು.


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.


ದೇವರು ಬಿಳಾಮನಿಗೆ, “ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರು?” ಎಂದು ಕೇಳಲು,


ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, “ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.


ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.


ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.


‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’


ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.


ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು