Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಬಿಳಾಮನು, “ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಬಿಳಾಮನು, “ಸರ್ವೇಶ್ವರ ನುಡಿಸುವುದನ್ನೇ ನಾನು ನುಡಿಯಬೇಕಾಗಿದೆಯಲ್ಲವೆ?” ಎಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ಬಿಳಾಮನು - ಯೆಹೋವನು ನುಡಿಸುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ಬಿಳಾಮನು, “ಯೆಹೋವನು ನನಗೆ ತಿಳಿಸುವುದನ್ನು ನಾನು ಹೇಳಬಾರದೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕೆ ಅವನು ಉತ್ತರವಾಗಿ, “ಯೆಹೋವ ದೇವರು ನನ್ನ ಬಾಯಿಯೊಳಗೆ ಇಡುವ ಮಾತನ್ನೇ ನಾನು ನುಡಿಯಬೇಕಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:12
11 ತಿಳಿವುಗಳ ಹೋಲಿಕೆ  

ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.


‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’


ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?” ಎಂದನು.


ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು.


ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು” ಎಂದನು.


ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.


ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.


ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು