Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:19
36 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.


ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.


ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.


ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.


ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.


ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಟಾಕ್ಷಿಸಿದ್ದೀ.


ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.


ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.”


ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?


ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.


ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.


ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.


ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ; ನನ್ನ ಮಾತನ್ನು ಬದಲಿಸುವುದಿಲ್ಲ.


“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.


ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ.


ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.


ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.


ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.


ಇದೆಲ್ಲಾ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,


ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.


ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು.


ಅವರು ನಿರ್ನಾಮವಾಗುವರು. ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ’. ಇದು ಯೆಹೋವನಾದ ನನ್ನ ಮಾತು. ನೀನು ಎದ್ದು ನಿನ್ನ ಮನೆಗೆ ಹೋಗು.


ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.


“ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂಬುದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.


ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು ಸೆಲಾ


ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು