Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ಜನರನ್ನು ಆಶೀರ್ವದಿಸಬೇಕೆಂಬ ಆದೇಶ ನನಗಿರುವುದು; ಸರ್ವೇಶ್ವರನಿತ್ತ ಆಶೀರ್ವಾದವನ್ನು ನಾನು ಮಾರ್ಪಡಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರನ್ನು ಆಶೀರ್ವದಿಸುವದಕ್ಕೆ ನನಗೆ ಅಪ್ಪಣೆಯಾಯಿತು; ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಜನರನ್ನು ಆಶೀರ್ವದಿಸಬೇಕೆಂದು ಯೆಹೋವನು ನನಗೆ ಆಜ್ಞಾಪಿಸಿದನು; ಯೆಹೋವನು ಅವರನ್ನು ಆಶೀರ್ವದಿಸಿದ್ದಾನೆ. ಅದನ್ನು ಬದಲಾಯಿಸಲು ನನಗೆ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಶೀರ್ವದಿಸುವುದಕ್ಕೆ ನಾನು ಅಪ್ಪಣೆ ಹೊಂದಿದ್ದೇನೆ. ಅವರು ಆಶೀರ್ವದಿಸಿದ ನಂತರ ನಾನು ಅದನ್ನು ಬದಲಾಯಿಸಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:20
12 ತಿಳಿವುಗಳ ಹೋಲಿಕೆ  

ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು.


ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.


ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.


ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು.


ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, “ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.


ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.


ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.


ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.


ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”


ಈಗ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸಿ, ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀ. ಯೆಹೋವನೇ, ನೀನು ಅದನ್ನು ಆಶೀರ್ವದಿಸಿದ್ದೀ. ಅದು ನಿತ್ಯವೂ ಸೌಭಾಗ್ಯದಿಂದಿರುವುದು” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು