Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದವನು ದೇವರೇ, ಅವರು ಕಾಡುಕೋಣದಷ್ಟು ಬಲವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರನ್ನು ದೇವರೇ ಕರೆದು ತಂದ ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡುಕೋಣದಷ್ಟು ಬಲವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವರು ಕಾಡು ಕೋಣದಂತೆ ಬಲಿಷ್ಠರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರು ಅವರನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ. ಅವರಿಗೆ ಕಾಡುಕೋಣದಂಥ ಬಲವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:22
14 ತಿಳಿವುಗಳ ಹೋಲಿಕೆ  

ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.


ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಷ್ಟು ಬಲವುಳ್ಳವರು. ಅವರು ಶತ್ರುಜನರನ್ನು ನಿರ್ಮೂಲಮಾಡುವರು. ವೈರಿಗಳ ಎಲುಬುಗಳನ್ನು ಮುರಿದುಹಾಕುವರು. ಅವರನ್ನು ಬಾಣಗಳಿಂದ ಗಾಯಪಡಿಸುವರು.


ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.


ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.


ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.


ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಎಂದನು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟಿದ್ದನ್ನೂ, ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಾಶಮಾಡಿದ್ದನ್ನೂ ಕೇಳಿ


ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಮತ್ತು ಹೋರಿಗೂಳಿಗಳೂ ಹತವಾಗುವವು. ಆ ದೇಶವು ರಕ್ತದಿಂದ ತೊಯಿದಿರುವುದು, ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.


ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.


ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು