Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯಾಕೋಬ್ಯರಲ್ಲಿ ಶಕುನನೋಡುವದು ಇಲ್ಲ; ಇಸ್ರಾಯೇಲ್ಯರಲ್ಲಿ ಕಣಿಕೇಳುವದು ಇಲ್ಲ. ದೇವರು ತಾನು ಮಾಡುವ ಕೆಲಸವನ್ನು ತತ್ಕಾಲದಲ್ಲೇ ಯಾಕೋಬ್ಯರಿಗೆ ತಿಳಿಸುತ್ತಾನೆ; ಸಮಯೋಚಿತವಾಗಿ ಅದನ್ನು ಇಸ್ರಾಯೇಲ್ಯರಿಗೆ ತೋರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ. ಜನರು, ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವರು: ‘ದೇವರು ಮಾಡಿದ ಮಹಾಕಾರ್ಯಗಳನ್ನು ನೋಡಿರಿ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ. ಇಸ್ರಾಯೇಲರಲ್ಲಿ ಶಕುನನೋಡುವದು ಇಲ್ಲ. ‘ನೋಡಿರಿ, ದೇವರು ಎಂತಹ ಮಹತ್ಕಾರ್ಯವನ್ನು ಮಾಡಿದ್ದಾರೆ,’ ಎಂದು ಯಾಕೋಬನ ವಿಷಯವಾಗಿಯೂ, ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:23
31 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನಾಗಿದ್ದ ಬಿಳಾಮನೂ ಇದ್ದನು.


ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು.


ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.


ನೀನು ಐಗುಪ್ತದೇಶದೊಳಗಿಂದ ಪಾರಾಗಿ ಬಂದ ಕಾಲದಲ್ಲಿ ನಾನು ತೋರಿಸಿದಂತೆ ಅದ್ಭುತಗಳನ್ನು ತೋರಿಸುವೆನು.


“ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.


ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.


ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.


ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.


ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.


ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.


ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.


ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.


ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


“ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.


ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಬೇರೆ ಯಾವ ದೇವರು ನಡೆಸಲಾರನು?


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು