Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವರೇ ಶಪಿಸಿಲ್ಲದವರನ್ನು ನಾನೇನೆಂತು ಶಪಿಸಲಿ? ಸರ್ವೇಶ್ವರನೇ ಧಿಕ್ಕರಿಸಿಲ್ಲದವರನ್ನು ನಾನೇನೆಂತು ಧಿಕ್ಕರಿಸಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಅವರನ್ನು ಏನೆಂದು ಶಪಿಸಲಿ; ದೇವರು ಶಪಿಸಲಿಲ್ಲವಲ್ಲಾ. ಏನೆಂದು ಆಕ್ರೋಶಿಸಲಿ; ಯೆಹೋವನು ಆಕ್ರೋಶಿಸಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ದೇವರು ಅವರನ್ನು ಆಶೀರ್ವದಿಸಿರುವಾಗ ನಾನು ಅವರನ್ನು ಶಪಿಸಲು ಆಗುವುದಿಲ್ಲ. ಯೆಹೋವನು ಅವರ ಮೇಲೆ ನಾಶನವನ್ನು ಬರಮಾಡಲಿಲ್ಲ. ಆದ್ದರಿಂದ ನಾಶನವು ಅವರ ಮೇಲೆ ಇಳಿದುಬರುವಂತೆ ಮಾಡಲು ನನಗೆ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವ ದೇವರು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:8
8 ತಿಳಿವುಗಳ ಹೋಲಿಕೆ  

ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.


ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.


ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು.


ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು.


ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’


ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು