Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ಕೇಳಿ ಬಾಲಾಕನಿಗೆ ಬಿಳಾಮನ ಮೇಲೆ ಕಡುಕೋಪ ಉಂಟಾಯಿತು. ಅವನು ಕೈಕೈಹಿಸಿಕಿಕೊಂಡು ಬಿಳಾಮನಿಗೆ, “ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆ; ಆದರೆ ನೀನು ಮೂರು ಸಾರಿಯೂ ಅವರನ್ನೇ ಆಶೀರ್ವದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ - ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರಿಸಿದೆನು; ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಬಿಳಾಮನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಈ ಮೂರು ಸಾರಿಯೂ ಆಶೀರ್ವದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:10
15 ತಿಳಿವುಗಳ ಹೋಲಿಕೆ  

ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ!


ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು.


“‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.


ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”


ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.”


ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.


ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು.


‘ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು’” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.


ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು.


ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.


ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು.


ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.


ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು