Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ‘ಸೈಪ್ರಸ್’ ಎಂಬ ಸ್ಥಳದಿಂದ ಹಡಗುಗಳಲ್ಲಿ ಬರುವರು ಜನರು ಸೋಲಿಸುವರವರು ಅಶ್ಯೂರ್ಯರನ್ನೂ ಏಬೆರ್ ಜರನ್ನೂ; ಅವರಿಗೂ ನಾಶವುಂಟಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಯೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶವುಂಟಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸೈಪ್ರಸ್‌ನ ತೀರಗಳಿಂದ ಹಡಗುಗಳು ಬರುವವು. ಅವರು ಅಶ್ಶೂರ್ಯವನ್ನೂ ಏಬೆರವನ್ನೂ ಸೋಲಿಸುವರು; ಆದರೆ ಅವರು ಸಹ ನಾಶವಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕಿತ್ತೀಮೆಂಬ ತೀರದಿಂದ ಹಡಗುಗಳು ಬಂದು, ಅಸ್ಸೀರಿಯರನ್ನೂ, ಏಬೆರ್ ಜನರನ್ನೂ ಸೋಲಿಸುವುವು. ಅವನು ಸಹ ಸದಾಕಾಲಕ್ಕೂ ನಾಶವಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:24
24 ತಿಳಿವುಗಳ ಹೋಲಿಕೆ  

ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.


ಅವನ ವಿರುದ್ಧವಾಗಿ ಕಿತ್ತೀಮಿನ ಹಡಗುಗಳು ಬರಲು, ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ತನಗೆ ಇಷ್ಟ ಬಂದಂತೆ ಮಾಡುವನು. ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆಯನ್ನು ತೊರೆದವರನ್ನು ಕಟಾಕ್ಷಿಸುವನು.


ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”


ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.


“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)


ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”


ಎಂದು ಅರಿಕೆಮಾಡಲು ಅವನು ನನಗೆ ಹೀಗೆ ಹೇಳಿದನು, “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯ ಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ ರಾಜ್ಯದ ದಿವ್ಯಪಾಲಕನು ಎದುರು ಬೀಳುವನು.


ಆ ಹೋತವು ಗ್ರೀಕ್ ರಾಜ್ಯ, ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.


ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.


ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.


ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.


ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.


ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ, “ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು?


ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ, ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ.


ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು