Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಕೋಬ್ಯರೇ, ನಿಮ್ಮ ಡೇರೆಗಳೆಷ್ಟು ರಮ್ಯ! ಇಸ್ರಯೇಲರೇ, ನಿಮ್ಮ ನಿವಾಸಗಳೆಷ್ಟು ಸುಂದರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಕೋಬ್ಯರೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ; ಇಸ್ರಾಯೇಲ್ಯರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯಾಕೋಬ್ಯರೇ, ನಿಮ್ಮ ಡೇರೆಗಳು ಬಹಳ ಸುಂದರವಾಗಿವೆ! ಇಸ್ರೇಲರೇ, ನೀವು ವಾಸಿಸುವ ಸ್ಥಳಗಳು ಬಹಳ ರಮ್ಯವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಯಾಕೋಬೇ, ನಿನ್ನ ಡೇರೆಗಳೂ; ಇಸ್ರಾಯೇಲರೇ, ನಿಮ್ಮ ಗುಡಾರಗಳೂ ಉತ್ತಮವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:5
13 ತಿಳಿವುಗಳ ಹೋಲಿಕೆ  

ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.


ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ. ನದಿಯ ಬಳಿಯಲ್ಲಿರುವ ತೋಟಗಳಂತೆಯೂ, ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ.


ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.


ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು, ಸ್ವದೇಶಸ್ಥರಾದ ಇಸ್ರಾಯೇಲರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು.


ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,


“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.


ಆದರೆ ನಾನು ಬಿಳಾಮನಿಗೆ ಸಮ್ಮತಿಕೊಡಲಿಲ್ಲವಾದುದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆನು.


ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.


ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ಕೊರತೆಯೂ ಇಲ್ಲ.


ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇಮಿನ ಹಾಗೆ ಮನೋಹರಿ, ಧ್ವಜಗಳ್ಳುಳ್ಳ ಸೈನ್ಯದ ಹಾಗೆ ಭಯಂಕರಿ!


ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಲಿ, ಉತ್ತರ ಕೊಡುವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿದುಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು