Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಒಪ್ಪಂದವೇನೆಂದರೆ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ವಾಗ್ದಾನ ಮಾಡುತ್ತೇನೆ. ಅವನು ತನ್ನ ದೇವರ ಗೌರವದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾನೆ; ಇಸ್ರಯೇಲರ ದೋಷಕ್ಕಾಗಿ ಪ್ರಾಯಶ್ಚಿತ್ತ ಮಾಡಿದ್ದಾನೆ. ಆದ್ದರಿಂದ ಅವನಿಗೇ ಈ ವಾಗ್ದಾನ ಮಾಡಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಒಡಂಬಡಿಕೆ ಏನಂದರೆ, ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಸ್ಥಾಪಿಸಿ ಇಸ್ರಾಯೇಲ್ಯರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:13
34 ತಿಳಿವುಗಳ ಹೋಲಿಕೆ  

ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”


ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.”


ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು.


ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು.


ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?


ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.


ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.


ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.


ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಆದುದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದವರನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.


ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.


ಮರುದಿನದಲ್ಲಿ ಮೋಶೆಯು ಜನರಿಗೆ, “ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ” ಎಂದು ಹೇಳಿದನು.


ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು,


ಸೊಲೊಮೋನನು ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತೆಗೆದುಹಾಕಿದನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.


ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.


ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.


ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು.


ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.


“ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.


ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು