Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಚಿನ್ ಮರುಭೂಮಿಯಲ್ಲಿ ಇಸ್ರಯೇಲ್ ಸಮಾಜದವರು ನನ್ನೊಡನೆ ವಿವಾದಿಸಿದರು. ಆಗ ನೀವಿಬ್ಬರೂ ನನ್ನ ಗೌರವವನ್ನು ಅವರ ಮುಂದೆ ಕಾಪಾಡದೆಹೋದಿರಿ; ನನ್ನ ಆಜ್ಞೆಯನ್ನು ಉಲ್ಲಂಘಿಸಿದಿರಿ. ಆದ್ದರಿಂದ ನೀವು ಆ ನಾಡನ್ನು ಸೇರಬಾರದು.” ಚಿನ್ ಮರುಭೂಮಿಯಲ್ಲಿನ ಕಾದೇಶಿನಲ್ಲಿರುವ ಮೆರಿಬಾ ಜಲಾಶಯದ ಬಳಿ ನಡೆದ ಘಟನೆಯನ್ನು ಸೂಚಿಸುತ್ತಾ ಇದನ್ನು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಚಿನ್ ಅರಣ್ಯದಲ್ಲಿ ಇಸ್ರಾಯೇಲ್ಯರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದದರಿಂದ ಆ ದೇಶವನ್ನು ಸೇರಬಾರದು ಎಂದು ಹೇಳಿದನು. ಚಿನ್ ಅರಣ್ಯದಲ್ಲಿ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸ್ರೇಲರ ಸಮೂಹದವರು ಚಿನ್ ಮರುಭೂಮಿಯಲ್ಲಿ ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಪವಿತ್ರತೆಯನ್ನು ಜನರ ಮುಂದೆ ತೋರಿಸದೆ ನನ್ನ ಆಜ್ಞೆಗೆ ಅವಿಧೇಯರಾದ ಕಾರಣ ಆ ದೇಶವನ್ನು ನೀನು ಸೇರಬಾರದು.” ಚಿನ್ ಮರುಭೂಮಿಯಲ್ಲಿ ಕಾದೇಶಿನ ಬಳಿ ಮೆರೀಬಾ ಬುಗ್ಗೆಯ ಕುರಿತಾಗಿ ಯೆಹೋವನು ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ನೀವು ಚಿನ್ ಎಂಬ ಮರುಭೂಮಿಯಲ್ಲಿ, ಇಸ್ರಾಯೇಲ್ ಜನಸಮೂಹದವರು ನನ್ನೊಡನೆ ವಾಗ್ವಾದ ಮಾಡಿದಾಗ ಅವರ ಮುಂದೆ ನೀರಿನ ಬಳಿಯಲ್ಲಿ ನನ್ನನ್ನು ಗೌರವಿಸದೆ, ನನ್ನ ಆಜ್ಞೆಯನ್ನು ಮೀರಿದಿರಿ. ಆ ನೀರು ಎಂದರೆ ಚಿನ್ ಎಂಬ ಮರುಭೂಮಿಯ ಕಾದೇಶಿನಲ್ಲಿರುವ ಮೆರೀಬಾದ ನೀರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:14
12 ತಿಳಿವುಗಳ ಹೋಲಿಕೆ  

ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;


ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.


“ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.


ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.


“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ಆಗ ಮೋಶೆಯು ಯೆಹೋವನ ಸಂಗಡ ಮಾತನಾಡಿ,


ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ನದಿದಾಟಿ ಆ ಒಳ್ಳೆಯ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ” ಎಂದು ಹೇಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು