Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದದರಿಂದ ಅವರ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನಾಯಕನಾಗಿ ಅವರ ಮುಂದೆ ಹೊರಡುವದಕ್ಕೂ ಅವರನ್ನು ಹಿಂದಕ್ಕೆ ಕರಕೊಂಡು ಬರುವದಕ್ಕೂ ಒಬ್ಬ ಪುರುಷನನ್ನು ನೇವಿುಸಬೇಕೆಂದು ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವನು ಅವರನ್ನು ಯುದ್ಧದಲ್ಲಿ ಮುನ್ನಡೆಸುವವನೂ ಸೈನ್ಯದ ಯೋಜನೆಗಳನ್ನು ರೂಪಿಸುವವನೂ ಆಗಿರಲಿ. ಆಗ ಯೆಹೋವನ ಸಮೂಹವು ಕುರುಬನಿಲ್ಲದ ಕುರಿಯಂತಾಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಅವರ ಮುಂದಾಗಿ ಹೋಗಲಿ, ಅವರ ಮುಂದಾಗಿ ಬರಲಿ. ಅವರನ್ನು ಕರೆದುಕೊಂಡು ಹೋಗಲಿ, ಕರೆದುಕೊಂಡು ಬರಲಿ. ಯೆಹೋವ ದೇವರ ಈ ಜನಸಮೂಹವು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:17
19 ತಿಳಿವುಗಳ ಹೋಲಿಕೆ  

ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು.


ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.


ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.


ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.


ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.


ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.


ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು.


ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು.


ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು” ಎಂದು ಹೇಳಿದರು.


ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.


ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.


ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.


ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.


ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು