Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದರು. ಅವರು ಕೋರಹನ ಜತೆ ಸೇರಿ ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದವರಲ್ಲ. ಅವರು ಸತ್ತದ್ದು ತಮ್ಮ ಸ್ವಂತ ಪಾಪದ ನಿಮಿತ್ತ. ಅವರಿಗೆ ಗಂಡುಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮ ತಂದೆ ಅರಣ್ಯದಲ್ಲಿ ಸತ್ತುಹೋದನು; ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ; ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಐದು ಹೆಣ್ಣುಮಕ್ಕಳು, “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದವರಲ್ಲಿ ಸೇರಿದವನಲ್ಲ. ನಮ್ಮ ತಂದೆಯು ತನ್ನ ಪಾಪದ ಫಲವಾಗಿ ಸತ್ತನು. ಅವನಿಗೆ ಗಂಡುಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನಮ್ಮ ತಂದೆಯು ಮರುಭೂಮಿಯಲ್ಲಿ ಸತ್ತನು. ಅವನು ಕೋರಹನ ಗುಂಪಿನಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ, ತನ್ನ ಪಾಪದಲ್ಲಿಯೇ ಸತ್ತನು. ಅವನಿಗೆ ಪುತ್ರರು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:3
16 ತಿಳಿವುಗಳ ಹೋಲಿಕೆ  

ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.


ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.


ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.


ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.


ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.


ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದನು.


ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ.


ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ.


ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.


ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,


ನಮ್ಮ ತಂದೆಗೆ ಗಂಡು ಮಗನಿಲ್ಲದ ಕಾರಣದಿಂದ ಅವನ ಹೆಸರು ಕುಲದಿಂದ ತೆಗೆದು ಹಾಕುವುದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವತ್ತನ್ನು ಕೊಡಬೇಕು” ಎಂದು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು