Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀವು ಸಬ್ಬತ್ ದಿನದಂದು ಹೆಚ್ಚಾಗಿ ಎರಡು ಕಳಂಕರಹಿತವಾದ ವರ್ಷದ ಕುರಿಗಳನ್ನು ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಆರು ಸೇರು ಗೋದಿಹಿಟ್ಟನ್ನು ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿತ್ಯ ದಹನಬಲಿಯ ಹೊರತು, ಪ್ರತಿ ಸಬ್ಬತ್ ದಿನಕ್ಕೆ ತಕ್ಕ ದಹನಬಲಿಯೂ ಅದರ ಪಾನದ ಅರ್ಪಣೆಯೂ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:10
16 ತಿಳಿವುಗಳ ಹೋಲಿಕೆ  

ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ನಿತ್ಯ ಸರ್ವಾಂಗಹೋಮಕ್ಕಾಗಿ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು, ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು.


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.


ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.


ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.


ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.


“‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.


ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.


ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು