Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ವಿಷಯದಲ್ಲಿ ನೀನು ಅವರಿಗೆ ಹೀಗೆಂದು ಅಪ್ಪಣೆಮಾಡು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದರ ವಿಷಯದಲ್ಲಿ ನೀನು ಅಪ್ಪಣೆ ಮಾಡಬೇಕಾದದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರಿಗೆ ಹೀಗೆ ಹೇಳು: ನೀವು ಯೆಹೋವನಿಗೆ ಕೊಡಬೇಕಾಗಿರುವ ತ್ಯಾಗಮಯವಾದ ಕಾಣಿಕೆಗಳು ಇವುಗಳೇ: ದಿನನಿತ್ಯದ ಸರ್ವಾಂಗಹೋಮಕ್ಕಾಗಿ ಒಂದು ವರ್ಷ ವಯಸ್ಸಿನ ಎರಡು ಗಂಡುಕುರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ಅವರಿಗೆ ಹೇಳಬೇಕಾದದ್ದು: ‘ನೀವು ಯೆಹೋವ ದೇವರಿಗೆ ಅರ್ಪಿಸಬೇಕಾದ ಅರ್ಪಣೆ ಏನೆಂದರೆ, ನಿಯಮಿತವಾಗಿ ಪ್ರತಿದಿನ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನು ದಹನಬಲಿಯಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:3
25 ತಿಳಿವುಗಳ ಹೋಲಿಕೆ  

“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.


ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.


ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.


ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು.


ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.


ಹೊತ್ತಾರೆಯಲ್ಲಿ ಒಂದು ಕುರಿಯನ್ನು, ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಸಮರ್ಪಿಸಬೇಕು.


ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು.


ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು.


ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.


ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.


ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.’”


ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು, ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು.


ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.


ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.


“ಬೇತೇಲಿಗೆ ಹೋಗಿ ದ್ರೋಹ ಮಾಡಿರಿ, ಗಿಲ್ಗಾಲಿನಲ್ಲಿ ಸೇರಿ ದ್ರೋಹವನ್ನು ಇನ್ನೂ ಹೆಚ್ಚಿಸಿರಿ. ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ.


ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು