Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ಪವಿತ್ರಸ್ಥಾನದಲ್ಲಿ ಪೀಠದ ಮೇಲೆ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ದೇವಸ್ಥಾನದಲ್ಲಿ ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರತಿಯೊಂದು ಕುರಿಮರಿಯೊಂದಿಗೆ ಒಂದೂವರೆ ಸೇರು ದ್ರಾಕ್ಷಾರಸವನ್ನು ಪಾನದ್ರವ್ಯದ ಕಾಣಿಕೆಯಾಗಿ ಅರ್ಪಿಸಬೇಕು. ಯೆಹೋವನಿಗೆ ಪಾನದ್ರವ್ಯವಾಗಿ ಅರ್ಪಿಸತಕ್ಕ ದ್ರಾಕ್ಷಾರಸವನ್ನು ಪವಿತ್ರಸ್ಥಳದಲ್ಲಿ ಸುರಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದು ಲೀಟರ್ ಹುದುಗಿದ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಯೆಹೋವ ದೇವರಿಗೋಸ್ಕರ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:7
17 ತಿಳಿವುಗಳ ಹೋಲಿಕೆ  

ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.


ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.


ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.


ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?


ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.’”


ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.


ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.


ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.


ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.


ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.


ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.


ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.


ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.


ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು.


ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು