Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಂಜೆ ಎರಡನೇ ಕುರಿಯನ್ನು ದಹನಬಲಿ ಕೊಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯ ಹಾಗು ಪಾನದ್ರವ್ಯಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಎರಡನೆ ಕುರಿಮರಿಯನ್ನು ನಸುಸಂಜೆಯಲ್ಲಿ ಅರ್ಪಿಸುವಾಗ, ಮುಂಜಾನೆಯಲ್ಲಿ ಅರ್ಪಿಸಿದಂತೆಯೇ ಅದರೊಡನೆ ಸಮರ್ಪಕವಾದ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಮಾಡಬೇಕು. ಇದು ಯೆಹೋವನಿಗೆ ತ್ಯಾಗಮಯವಾದ ಅರ್ಪಣೆಯಾಗಿದ್ದು ಸುಗಂಧ ವಾಸನೆಯನ್ನು ಉಂಟುಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎರಡನೆಯ ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಬೆಳಿಗ್ಗೆ ಮಾಡಿದಂತೆಯೇ, ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:8
6 ತಿಳಿವುಗಳ ಹೋಲಿಕೆ  

ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.


“‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.


ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ನಿತ್ಯ ಸರ್ವಾಂಗಹೋಮಕ್ಕಾಗಿ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.


ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.


ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.


ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು