Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಕೆಹಾತ್ಯರ ಗೋತ್ರಗಳ ಪ್ರಧಾನಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಈ ಕೆಹಾತ್ಯರ ಗೋತ್ರಗಳ ಮುಖ್ಯಸ್ಥನು ಉಜ್ಜೀಯೇಲನ ಮಗ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಕೆಹಾತ್ಯರ ಗೋತ್ರಗಳ ಪ್ರಧಾನ ಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಕೆಹಾತ್ಯರ ನಾಯಕ ಉಜ್ಜೀಯೇಲನ ಮಗನಾದ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಉಜ್ಜೀಯೇಲನ ಪುತ್ರನಾದ ಎಲೀಚಾಫಾನನು ಕೊಹಾತ್ಯರ ಕುಟುಂಬಗಳ ನಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:30
7 ತಿಳಿವುಗಳ ಹೋಲಿಕೆ  

ಉಜ್ಜೀಯೇಲನ ಮಕ್ಕಳು: ಮೀಷಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ.


ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರೂ, ಹೆಬ್ರೋನ್ ಗೋತ್ರದವರೂ, ಉಜ್ಜೀಯೇಲ್ ಗೋತ್ರದವರೂ ಇದ್ದರು.


ಕೆಹಾತ್ಯರ ಗೋತ್ರಗಳವರು ದೇವದರ್ಶನದ ಗುಡಾರದ ದಕ್ಷಿಣ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.


ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು.


ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.


ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು