Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು, ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಸೇವಾಕಾರ್ಯವನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ದೇವದರ್ಶನದ ಗುಡಾರದ ಬಳಿಯಲ್ಲಿರಬೇಕು; ಆರೋನನಿಗೂ ಇಡೀ ಸಮಾಜಕ್ಕೂ ನೆರವಾಗಿ ದೇವಸ್ಥಾನದ ಪರಿಚರ್ಯವನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಲೇವಿಯರು ಅವನಿಗಾಗಿ ಮತ್ತು ಇಡೀ ಸಮೂಹಕ್ಕಾಗಿ ದೇವದರ್ಶನಗುಡಾರದ ಮುಂದೆ ಕಾವಲುಗಾರರಾಗಿರುವರು ಮತ್ತು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ದೇವದರ್ಶನದ ಗುಡಾರದ ಸೇವೆಮಾಡುತ್ತಾ ಆರೋನನಿಗಾಗಿಯೂ ಸಮಸ್ತ ಸಮೂಹದವರಿಗಾಗಿಯೂ ಕರ್ತವ್ಯಗಳನ್ನು ನಿರ್ವಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:7
13 ತಿಳಿವುಗಳ ಹೋಲಿಕೆ  

ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


“ಅದಾದ ನಂತರ ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಬೇಕು.


ಲೇವಿಯರು ಯೆಹೋವನ ಸೇವಾಕಾರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲರ ನಿಮಿತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.


ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.


ಯೆಹೀಯೇಲ್ಯರಾದ ಜೇತಾಮನೂ ಮತ್ತು ಅವನ ತಮ್ಮನಾದ ಯೋವೇಲನು ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು.


ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.


ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.


ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು.


ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು.


ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು. ಇಸ್ರಾಯೇಲರಿಗೋಸ್ಕರ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು.


ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು