Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನೀನು ಲೇವಿಯರನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಒಪ್ಪಿಸಬೇಕು. ಇಸ್ರಾಯೇಲರಲ್ಲಿ ಆರೋನನಿಗೆ ಸಂಪೂರ್ಣವಾಗಿ ಒಪ್ಪಿಸಲ್ಪಟ್ಟವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀನು ಲೇವಿಯರನ್ನು ಆರೋನನಿಗೂ ಅವನ ಮಕ್ಕಳಿಗೂ ಒಪ್ಪಿಸು. ಇಸ್ರಯೇಲರಲ್ಲಿ ಆರೋನನಿಗೆ ಸಂಪೂರ್ಣ ಶರಣರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಲೇವಿಯರನ್ನು ಆರೋನನಿಗೂ ಅವನ ಮಕ್ಕಳಿಗೂ ಒಪ್ಪಿಸಬೇಕು; ಇಸ್ರಾಯೇಲ್ಯರಲ್ಲಿ ಆರೋನನಿಗೆ ಸಂಪೂರ್ಣವಾಗಿ ವಶಮಾಡಲ್ಪಟ್ಟವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸಿಕೊಡು. ಅವರು ಇಸ್ರೇಲರ ಮಧ್ಯದಿಂದ ಆರೋನನಿಗೋಸ್ಕರವಾಗಿ ಪ್ರತಿಷ್ಠಿತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸು. ಇಸ್ರಾಯೇಲರೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲಾದವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:9
15 ತಿಳಿವುಗಳ ಹೋಲಿಕೆ  

ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.


ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”


ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು. ಇಸ್ರಾಯೇಲರಿಗೋಸ್ಕರ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು.


ಇಸ್ರಾಯೇಲರಲ್ಲಿ ಇವರು ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಇಸ್ರಾಯೇಲರಲ್ಲಿ ಚೊಚ್ಚಲ ಮಕ್ಕಳಿಗೆ ಬದಲಾಗಿ ನಾನು ಲೇವಿಯರನ್ನು ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.


ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?


ಹೀಗೆ ನೀನು ಲೇವಿಯರನ್ನು ಇಸ್ರಾಯೇಲರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.


ನಾನು ಇಸ್ರಾಯೇಲರ ಚೊಚ್ಚಲಮಕ್ಕಳಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ.


ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.


ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ.


ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.


ದೇವಸ್ಥಾನದಾಸರಲ್ಲಿ: ಜೀಹ ಸಂತಾನದವರು ಮತ್ತು ಹಸೂಫ, ಟಬ್ಬಾವೋತ್,


ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.


ದಾವೀದನೂ ಅವನ ಮುಖ್ಯಸ್ಥರನ್ನು ಲೇವಿಯರೊಂದಿಗೆ ಸೇವೆಗಾಗಿ ಕೊಟ್ಟು ದೇವಸ್ಥಾನ ಪರಿಚಾರಕರಲ್ಲಿ ಇನ್ನೂರಿಪ್ಪತ್ತು ಜನರನ್ನೂ ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು