Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡಿದರೂ, ದೋಷಿಯೆಂದು ಎಣಿಸಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುತ್ತವೆ. ಗಂಡನು ರದ್ದುಮಾಡಿದ್ದರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ರದ್ದುಮಾಡಿದ್ದರಿಂದ ಅಂಥವಳು ಯೆಹೋವನಿಂದ ದೋಷಿಯೆಂದು ಎಣಿಸಲ್ಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಗಂಡನು ಅವುಗಳನ್ನು ತಿಳಿದಾಗಲೇ ರದ್ದುಗೊಳಿಸಿದರೆ, ಅವಳ ಎಲ್ಲ ಹರಕೆಗಳಿಗೆ ಮತ್ತು ಆಣೆಗಳಿಗೆ ಬೆಲೆಯಿರುವುದಿಲ್ಲ. ಯಾಕೆಂದರೆ ಗಂಡನು ಅವುಗಳನ್ನು ರದ್ದುಪಡಿಸಿದನು. ಆದ್ದರಿಂದ ಯೆಹೋವನು ಆಕೆಯನ್ನು ಕ್ಷಮಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕ ಮಾಡಿದ ಪಕ್ಷದಲ್ಲಿ ಅವಳ ಹರಕೆಗಳಿಗೋಸ್ಕರವೂ ಅವಳು ಕೈಗೊಂಡ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವುದಾಗಲಿ ನಿಲ್ಲದು. ಅವಳ ಗಂಡನು ಅವುಗಳನ್ನು ನಿರರ್ಥಕ ಮಾಡಿದ್ದಾನೆ. ಯೆಹೋವ ದೇವರು ಅವಳಿಗೆ ಕ್ಷಮಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:12
10 ತಿಳಿವುಗಳ ಹೋಲಿಕೆ  

ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.


ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ.


ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ, ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.


ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.


ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,


ಅವಳ ಗಂಡನು ತಿಳಿದು ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಿಲ್ಲುವವು.


ಹೆಂಡತಿ ಮಾಡಿದ ಹರಕೆಯನ್ನೂ, ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.


ಆಕೆಯ ಗಂಡನಾದ ಎಲ್ಕಾನನು ಆಕೆಗೆ “ನಿನಗೆ ಸರಿತೋರುವ ಹಾಗೆ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ” ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು.


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು