Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮಲ್ಲಿ ಯಾರಾದರು ಸರ್ವೇಶ್ವರನಿಗೆ ಹರಕೆ ಮಾಡಿದರೆ, ಇಲ್ಲವೆ ತಾನು ವಸ್ತುವೊಂದನ್ನು ಮುಟ್ಟುವುದಿಲ್ಲವೆಂದು ಆಣೆಯಿಟ್ಟು ಹೇಳಿದರೆ ಅಂಥವನು ತನ್ನ ಮಾತನ್ನು ಮೀರದೆ ನುಡಿದಂತೆ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾವನಾದರೂ ಯೆಹೋವನಿಗೆ ಹರಕೆಮಾಡಿದರೆ ಇಲ್ಲವೆ ತಾನು ಯಾವದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯಾವನಾದರೂ ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿದರೆ ಅಥವಾ ತಾನು ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ, ಅವನು ತನ್ನ ಮಾತನ್ನು ಮೀರದೆ ತಾನು ಹೇಳಿದಂತೆಯೇ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯಾವನಾದರೂ ಯೆಹೋವ ದೇವರಿಗೆ ಹರಕೆಯನ್ನು ಮಾಡಿದರೆ, ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ, ಅವನು ತನ್ನ ಮಾತನ್ನು ತಪ್ಪಿಸಬಾರದು. ಬಾಯಿಂದ ಹೊರಟ ಮಾತುಗಳ ಪ್ರಕಾರ ಎಲ್ಲವನ್ನೂ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:2
36 ತಿಳಿವುಗಳ ಹೋಲಿಕೆ  

ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.


ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.


ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.


ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.


ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ” ಅಂದನು.


ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.


“ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.


ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,


ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.


ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.


ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.


ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.


ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; “ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ.


ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.


“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.


ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.


ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.


ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.


ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.


“ಮುತ್ತೈದೆಯು ಅಂತಹ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ,


ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು.


ನೀವು ನಿಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ, ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ಕಟ್ಟಿಕೊಂಡ ತರುವಾಯ ನಿಮ್ಮ ಮಾತಿನ ಪ್ರಕಾರ ಮಾಡಿರಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು