Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪೆಗೋರದ ಬಾಳನ ವಿಷಯದಲ್ಲಿ ಬಿಳಾಮನ ದುರಾಲೋಚನೆಯನ್ನು ಅನುಸರಿಸಿ, ಇಸ್ರಯೇಲರನ್ನು ಸರ್ವೇಶ್ವರನಿಗೆ ದ್ರೋಹಿಗಳನ್ನಾಗಿಸಿ, ಸಮಾಜದವರಲ್ಲಿ ಘೋರ ವ್ಯಾಧಿಯುಂಟಾಗುವಂತೆ ಮಾಡಿದವರು ಅವರೇ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲ್ಯರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿಯುಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:16
11 ತಿಳಿವುಗಳ ಹೋಲಿಕೆ  

ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.


ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.


ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಲಿಲ್ಲ.


ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.


ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.


ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ.


ಅವರು ಪೆಗೋರದ ವಿಷಯದಲ್ಲಿಯೂ, ಮಿದ್ಯಾನ್ಯರ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ತ್ರೀಯ ವಿಷಯದಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದ್ದಾರೆ. ಆ ಸ್ತ್ರೀಯು ಪೆಗೋರದ ಘಟನೆಗಳ ನಿಮಿತ್ತ ಘೋರ ವ್ಯಾಧಿ ಉಂಟಾದಾಗ ಹತಳಾದವಳು.”


ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.


ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.


ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು