Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯಿಂದ ಸುಡಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವುಗಳನ್ನು, ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯನ್ನು ತಡೆಯಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು; ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯನ್ನು ತಡೆಯಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ಬೆಂಕಿಯಿಂದ ದಾಟಿಸಬೇಕು. ಆಗ ಅವು ಶುದ್ಧವಾಗುವುವು. ಶುದ್ಧೀಕರಣದ ನೀರಿನಲ್ಲಿ ಅದ್ದಿ ಶುದ್ಧಮಾಡಬೇಕು. ಆಗ ಅವು ಶುದ್ಧವಾಗುವುವು. ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:23
20 ತಿಳಿವುಗಳ ಹೋಲಿಕೆ  

“ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಆದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು.


“ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು.


ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.


ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.


ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು.


ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.


ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು,


ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಮೇಲೆ ನೀವು ಪಾಳೆಯದೊಳಗೆ ಬರಬಹುದು” ಎಂದು ಹೇಳಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,


ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು