Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯುದ್ಧಕ್ಕೆ ಹೋದ ಸೈನಿಕರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು ಮತ್ತು ಕುರಿಗಳನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಜನರಿಂದಲೂ, ಪಶುಗಳಿಂದಲೂ, ಕತ್ತೆಗಳಿಂದಲೂ, ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಭಟರ ಕಡೆಯಿಂದ ಯೆಹೋವ ದೇವರಿಗೆ ಕಪ್ಪವಾಗಿ ಎತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:28
18 ತಿಳಿವುಗಳ ಹೋಲಿಕೆ  

“ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.


ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.


ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.


ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.


ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.


ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.


ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.


ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.


ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು.


ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು.


“ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.


ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.


ಅವರ ಅರ್ಧಪಾಲಿನಿಂದ ಅದನ್ನು ತೆಗೆದುಕೊಂಡು ಯೆಹೋವನಿಗೆ ಅರ್ಪಣೆಯಾಗಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.


ಇಸ್ರಾಯೇಲ್ಯರಿಗಾಗಿ ಯೆಹೋವನು ಆರಿಸಿಕೊಂಡ ಸ್ಥಳದಲ್ಲಿ ಕಟ್ಟಲಾಗುವ ಆತನ ಯಜ್ಞವೇದಿಗೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ಹೊರುವವರನ್ನಾಗಿ ಅವರನ್ನು ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸವನ್ನು ಮಾಡಿಕೊಂಡು ಇಸ್ರಾಯೇಲ್ಯರೊಂದಿಗಿದ್ದಾರೆ.


ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು