Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಆದರೆ ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಕೊಟ್ಟ ಚಿನ್ನವನ್ನು ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಸ್ವೀಕರಿಸಿ ಅದನ್ನು ಇಸ್ರಯೇಲರಿಗೋಸ್ಕರ ಸ್ಮರಣಾರ್ಥವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದೊಳಗಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲ್ಯರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕಕೊಡುವದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ತೆಗೆದುಕೊಂಡು ದೇವದರ್ಶನಗುಡಾರದಲ್ಲಿ ಇಟ್ಟರು. ಇಸ್ರೇಲರ ವಿಷಯದಲ್ಲಿ ಜ್ಞಾಪಕಾರ್ಥವಾಗಿ ಇದು ಯೆಹೋವನ ಸನ್ನಿಧಿಯಲ್ಲಿ ಇಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತೆಗೆದುಕೊಂಡು, ಯೆಹೋವ ದೇವರ ಸಮ್ಮುಖದಲ್ಲಿ ಇಸ್ರಾಯೇಲರಿಗೆ ಜ್ಞಾಪಕಕ್ಕಾಗಿ ದೇವದರ್ಶನ ಗುಡಾರದೊಳಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:54
12 ತಿಳಿವುಗಳ ಹೋಲಿಕೆ  

ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”


“‘ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಯೋಷೀಯ ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಡಲಾಗಿದೆ.


ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.


ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.


ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.


ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.


ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು.


ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.


ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.


ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.


ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು