Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಹೀಗೆ ಮೋಶೆ ಗಾದ್ಯರಿಗು, ರೂಬೇನ್ಯರಿಗು, ಹಾಗು ಜೋಸೆಫನ ಮಗನಾದ ಮನಸ್ಸೆಯ ಕುಲದ ಅರ್ಧ ಜನರಿಗು ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನು, ಬಾಷಾನಿನ ಅರಸನಾದ ಓಗನ ರಾಜ್ಯವನ್ನು, ಅವುಗಳ ಎಲ್ಲ ಊರುಗಳನ್ನು ಮತ್ತು ಆ ಊರುಗಳಿಗೆ ಸೇರಿದ ಎಲ್ಲ ಭೂಮಿಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹೀಗೆ ಮೋಶೆಯು ಗಾದ್ಯರಿಗೂ ರೂಬೇನ್ಯರಿಗೂ ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ ಇವುಗಳ ಎಲ್ಲಾ ಊರುಗಳನ್ನೂ ಆ ಊರುಗಳಿಗೆ ಸೇರಿದ ಭೂವಿುಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆಗ ಮೋಶೆಯು ಗಾದ್ ಮತ್ತು ರೂಬೇನ್ ಕುಲಗಳವರಿಗೆ ಮತ್ತು ಯೋಸೇಫನ ಮಗನಾದ ಮನಸ್ಸೆಯ ಅರ್ಧಕುಲದವರಿಗೆ ಅಮೋರಿಯರ ರಾಜನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ರಾಜನಾದ ಓಗನ ರಾಜ್ಯವನ್ನೂ ಅವುಗಳ ಎಲ್ಲಾ ಊರುಗಳನ್ನೂ ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಅರಸನಾದ ಓಗನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅದರ ಭೂಮಿಯನ್ನೂ, ಅದರ ಮೇರೆಗಳಲ್ಲಿ ಸುತ್ತಮುತ್ತಲ ಪಟ್ಟಣಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:33
21 ತಿಳಿವುಗಳ ಹೋಲಿಕೆ  

ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು.


ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.


ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ, ಗಾದ್ಯರಿಗೂ ಹಾಗು ಮನಸ್ಸೆ ಕುಲದವರಲ್ಲಿ ಅರ್ಧಜನರಿಗೂ ಸ್ವತ್ತಾಗಿ ಕೊಟ್ಟೆವಷ್ಟೆ.


ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು.


ಮನಸ್ಸೆಯ ಅರ್ಧ ಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇಮಿಸಲ್ಪಟ್ಟವರು ಹದಿನೆಂಟು ಸಾವಿರ ಸೈನಿಕರು.


ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರಲ್ಲಿ ರಣವೀರರೂ ಗುರಾಣಿ ಖಡ್ಗಗಳನ್ನು ಹಿಡಿಯುವವರೂ, ಬಿಲ್ಲನ್ನು ಬೊಗ್ಗಿಸುವವರೂ, ಯುದ್ಧ ನಿಪುಣರೂ ಆಗಿರುವ ನಲ್ವತ್ತನಾಲ್ಕು ಸಾವಿರದ ಏಳು ನೂರ ಅರವತ್ತು ಸೈನಿಕರಿದ್ದರು.


ರೂಬೇನ್ಯರ ಮಕ್ಕಳ ಗೋತ್ರವೂ, ಗಾದ್ಯರ ಮಕ್ಕಳ ಗೋತ್ರವೂ, ಮನಸ್ಸೆ ಕುಲದವರಲ್ಲಿ ಅರ್ಧಗೋತ್ರವೂ ತಮ್ಮ ಪೂರ್ವಿಕರ ಗೋತ್ರಗಳ ಪ್ರಕಾರವಾಗಿ ತಮ್ಮ ಸ್ವತ್ತನ್ನು ಹೊಂದಿದ್ದಾರೆ.


ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.


ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು” ಎಂದರು.


ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.


ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.


ಮೋಶೆಯು ಮನಸ್ಸೆ ಕುಲದ ಅರ್ಧ ಜನರಿಗೆ ಬಾಷಾನಿನಲ್ಲಿ ಸ್ವತ್ತನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳುಹಿಸುವಾಗ


ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ, ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು.


ಎರಡುವರೆ ಗೋತ್ರಗಳು ತಮ್ಮ ಸ್ವತ್ತನ್ನು ಯೊರ್ದನ್ ನದಿಯ ಆಚೆ ಯೆರಿಕೋ ಪಟ್ಟಣದ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು